ವಿಚಾರ ತಿಳಿದ ಬಾಗಲಕೋಟೆ ಎಸ್.ಪಿ. ರಿಷ್ಯಂತ್ ಆಸ್ಪತ್ರೆಗೆ ಭೇಟಿ ನೀಡಿ ಯುವಕ ಶರಣಪ್ಪ ಮತ್ತು ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ. ಮಹ್ಮದ್ ರಫಿ,ಇಸ್ಮಾಯಿಲ್ ಎನ್ನುವವನು ತನಗೆ ಭಯೋತ್ಪಾದನೆ ಸಂಘಟನೆಗೆ ಸೇರುವಂತೆ ಕಾಲೇಜ್ಗೆ ಬಾಂಬ್ ಇಡುವಂತೆ ಬೆದರಿಸುತ್ತಿದ್ದರು ಎಂದ ಆರೋಪಿಸಿದ ಯುವಕ ಯಾವುದೇ ಮಾಹಿತಿಯನ್ನು ಸ್ಪಷ್ಟವಾಗಿ ಹೇಳುತ್ತಿಲ್ಲ. ಆದರೆ ಯುವಕನ ಕುಟುಂಬಸ್ಥರು ಈ ವಿಚಾರವನ್ನು ತಿರಸ್ಕರಿಸಿದ್ದು ತನ ಆರೋಗ್ಯ ಸರಿ ಇಲ್ಲ, ಮಾನಸಿಕ ಸ್ಥಿತಿ ಉತ್ತಮವಾಗಿಲ್ಲ. ಮೇಲಾಗಿ ಆತನಿಗೆ ಯಾವುದೇ ಭಯೋತ್ಪಾದಕರ ಜತೆ ಸಂಪರ್ಕ ಇಲ್ಲ ಎಂದಿದ್ದಾರೆ.