ತುಮಕೂರು: ದುಷ್ಕರ್ಮಿಗಳು ತುಮಕೂರಿನ ಹಿರೇಹಳ್ಳಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿರುವ ಎಸ್ ಬಿಐ ಬ್ಯಾಂಕ್ ಗೋಡೆ ಕೊರೆದು, ಬ್ಯಾಂಕ್ ಒಳಗಡೆ ಇದ್ದ ಎಟಿಎಂ ಒಡೆದು 30 ಲಕ್ಷ ರುಪಾಯಿ ದರೋಡೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ದರೋಡೆಕೋರರು ಬ್ಯಾಂಕ್ ನಲ್ಲಿದ್ದ ಸಿ.ಸಿ.ಟಿವಿ ಕ್ಯಾಮೆರಾ ಮತ್ತು ದೃಶ್ಯ ಸಂಗ್ರಹವಾಗುವ ಉಪಕರಣವನ್ನು ಹೊತ್ತೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಎಟಿಎಂಗೆ ಭದ್ರತಾ ಸಿಬ್ಬಂದಿ ಇರಲಿಲ್ಲ. ಬೆಳಗ್ಗೆ ಎಟಿಎಂಗೆ ಗ್ರಾಹಕರು ಹಣ ತೆಗೆದುಕೊಳ್ಳಲು ಬಂದಾಗ ವಿಷಯ ಗೊತ್ತಾಗಿದೆ. ಬಳಿಕ ಬ್ಯಾಂಕ್ ವ್ಯವಸ್ಥಾಪಕರಿಗೆ ತಿಳಿಸಿದ್ದಾರೆ. ಬಳಿಕ ಬ್ಯಾಂಕ್ ಸಿಬ್ಬಂದಿ ಕ್ಯಾತ್ಸಂದ್ರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಎಸ್ ಬಿಐ ಬ್ಯಾಂಕ್ ನ ಸಹಾಯಕ ವ್ಯವಸ್ಥಾಪಕ ಮಹದೇಶ್ವರ್ ಅವರು ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ದರೋಡೊಕೋರರಿಗೆ ಬಲೆ ಬೀಸಿದ್ದಾರೆ.