ಸರ್ಕಾರ ರಚನೆ ಮಾಡಿರುವ ಸಮಿತಿಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನ್ಯಾ.ನಾಗಮೋಹನ್ ದಾಸ್ ಸಮಿತಿಯ ಅಧ್ಯಕ್ಷರಾಗಿದ್ದು, ಚಿಂತಕ ಪ್ರೊ.ಮುಜಾಫರ್ ಅಸಾದಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್. ದ್ವಾರಕಾನಾಥ್, ಹಿರಿಯ ಪತ್ರಕರ್ತ ಸರಜೂಕಾಟ್ಕರ್, ವಿಮರ್ಶಕ ಡಾ.ಪುರುಷೋತ್ತಮ ಬಿಳಿಮಲೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಹಿರಿಯ ಸಾಹಿತಿ ರಾಮಕೃಷ್ಣ ಮರಾಠೆ ಸಮಿತಿಯ ಸದಸ್ಯರಾಗಿದ್ದಾರೆ.