ದೇವಸ್ಥಾನದ ಧ್ವನಿವರ್ಧಕದಿಂದ ಸ್ಥಳೀಯ ಫ್ಲ್ಯಾಟ್ ಗಳಲ್ಲಿ ನೆಲೆಸುವವರಿಗೆ ತೊಂದರೆಯಾಗುತ್ತಿದ್ದು, ದೇವಸ್ಥಾನದ ಒಳಭಾಗಕ್ಕೆ ಕೇಳಿಸುವಂತೆ ಮಾತ್ರ ಹಾಕಲು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯಿಂದ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಈ ಮನವಿಗೆ ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ಒಂಡು ವೇಳೆ ಧ್ವನಿವರ್ಧಕದಲ್ಲಿ ಹಾಕುವ ಭಕ್ತಿ ಗೀತೆಗಳನ್ನು ನಿಲ್ಲಿಸಿದರೆ ಉಗ್ರ ಹೋರಾಟ ಮಾಡುವುದಾಗಿ ಹಿಂದೂಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.