ಸಿರಿಧಾನ್ಯ ಮತ್ತು ಸಾವಯವ ಆಹಾರ ಬಳಕೆ ಮಹತ್ವ ಕುರಿತು ಅರಿವು ಮೂಡಿಸುವ ಮೂಲಕ ರೈತರಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಮುಂದಿನ ತಿಂಗಳ 19ರಿಂದ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳ ಆಯೋಜಿಸಲಾಗುತ್ತಿದೆ, ಬೃಹತ್ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.