ಇನ್ನು ಧಾರವಾಡದಲ್ಲಿ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ ಮಾಡಲಾಗಿದ್ದು, ಮುಂಜಾಗೃತ ಕ್ರಮವಾಗಿ 1000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಎರಡು ಕೆಎಸ್ ಆರ್ ಪಿ ತುಕಡಿ, 12 ಜಿಲ್ಲಾ ಸಶಸ್ತ್ರ ಮೀಸಲು ಪಡೆ, 200 ಗೃಹ ರಕ್ಷಕದಳ ಸಿಬ್ಬಂದಿ, ಎಸ್ಪಿ, 3 ಡಿವೈಎಸ್ ಪಿ, 12 ಸಿಪಿಐ, 15 ಪಿಎಸ್ಐ ಸೇರಿ 500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ನವಲಗುಂದ ಪಟ್ಟಣದಲ್ಲಿ ಹೆಚ್ಚನ ಭದ್ರತೆ ನೀಡಲಾಗಿದೆ. ಅಂತೆಯೇ ಹುಬ್ಬಳ್ಳಿಯಲ್ಲಿಯೂ ಬಂದ್ ಗೆ ಬೆಂಬಲ ವ್ಯಕ್ತವಾಗಿದ್ದು, ಪ್ರತಿಭಟನಾಕಾರರು ಚೆನ್ನಮ್ಮ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಎಸ್ ಆರ್ ಟಿಸಿ, ಖಾಸಗಿ ಬಸ್ ಗಳ ಸೇವೆ ಸ್ಥಗಿತಗೊಂಡಿದ್ದು, ಬಸ್ ನಿಲ್ದಾಣ ಬಿಕೋ ಎನ್ನುತ್ತಿವೆ.