1904 ಡಿಸೆಂಬರ್ 29ರಂದು ಕುಪ್ಪಳ್ಳಿಯಲ್ಲಿ ಕುವೆಂಪು ಅವರು ಜನಿಸಿದ್ದರು. ಶ್ರೀರಾಮಯಣ ದರ್ಶನಂ, ಮಲೆಗಳಲ್ಲಿ ಮದುಮಗಳು ನಂತಹ ಮೇರು ಕೃತಿಗಳನ್ನು ರಚಿಸಿರುವ ಕುವೆಂಪು ಅವರು, ನಾಟಕ, ವಿಮರ್ಶೆ, ಪ್ರೇಮಗೀತೆ, ಕಾದಂಬರಿ, ಕಾವ್ಯ, ವಿಮರ್ಶಾತ್ಮಕ ಪ್ರಬಂಧ, ಮಕ್ಕಳ ನಾಟಕ, ಸಾನೆಟ್ಟುಗಳು, ಮಹಾಕಾವ್ಯ ಹೀಗೆ ವಿವಿಧ ಪ್ರಕಾರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರವನ್ನು ಉತ್ತುಂಗಕ್ಕೆ ಕೊಂಡೊಯ್ದವರಲ್ಲಿ ಪ್ರಮುಖರಾಗಿರುವ ಕುವೆಂಪು ಅವರು, ಕನ್ನಡಕ್ಕೆ ತಮ್ಮ ‘ಶ್ರೀ ರಾಮಾಯಣ ದರ್ಶನಂ’ ಕೃತಿಯ ಮೂಲಕ ಮೊದಲ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.