ನಿನ್ನೆ ತುಮಕೂರು ಜಿಲ್ಲೆಯ ಶಿರಾದ ಸರ್ಕಾರಿ ಕಾಲೇಜು ಮೈದಾನದಲ್ಲಿ ಸಿದ್ದರಾಮಯ್ಯ ಅವರು ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಪ್ರಾರಂಭಕ್ಕೂ ಮೊದಲು ನಾಡಗೀತೆ ಹಾಡುವ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವ ಟಿ.ಬಿ ಜಯಚಂದ್ರ, ಎಚ್. ಆಂಜನೇಯ, ಸೇರಿದಂತೆ ಸ್ಥಳೀಯ ಶಾಸಕರು, ಉನ್ನತ ಮಟ್ಟದ ಅಧಿಕಾರಿಗಳು ಎದ್ದು ನಿಂತು ಗೌರವ ಸೂಚಿಸುತ್ತಿದ್ದರು.