ಇನ್ನು ಬೆಂಗಳೂರಿನಿ ವೈಯಾಲಿಕಾವಲ್, ಜೆಪಿನಗರ, ಕೋಟೆ ವೆಂಕಟರಮಣ ದೇಗುಲ ಮತ್ತು ಸಿರ್ಸಿ ವೃತ್ತದಲ್ಲಿರುವ ಶ್ರೀನಿವಾಸ ದೇಗುಲಗಳಲ್ಲಿ ಮುಂಜಾನೆಯಿಂದಲೇ ದರ್ಶನ ಸೇವೆ ಆರಂಭಿಸಲಾಗಿದ್ದು, ಲಕ್ಷಾಂತರ ಮಂದಿ ಭಕ್ತರು ಶ್ರೀನಿವಾಸನ ದರ್ಶನ ಪಡೆಯುತ್ತಿದ್ದಾರೆ. ಇದಲ್ಲದೆ ಬೆಂಗಳೂರಿನ ಇಸ್ಕಾನ್, ತಿರುಪತಿ ತಿರುಮಲ ದೇವಸ್ತಾನಂ, ವೆಂಕಟೇಶ್ವರ ದೇಗುಲದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ಸಲ್ಲಿಸಲಾಯಿತು. ಇಂದು ವೈಕುಂಠ ಏಕಾದಶಿಯಾಗಿದ್ದು, ಇಂದು ಸ್ವರ್ಗದ ಬಾಗಿಲು ತೆರೆದಿರುತ್ತದೆ. ಇಂದು ಶ್ರೀನಿವಾಸ ದರ್ಶನ ಪಡೆದರೆ ಪಾಪ ಪರಿಹಾರವಾಗಿ ಶ್ರೀನಿವಾಸನ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ.