ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಯೊಂದಿಗೆ ಸಂದರ್ಶನದಲ್ಲಿ ಮಾತನಾಡಿರುವ ಆಯುಕ್ತರು, ವಿಂಗಡಿಸಿದ ಕಸವನ್ನು ಮಾತ್ರ ತೆಗೆದುಕೊಳ್ಳುವಂತೆ ನಿಯಮ ಜಾರಿಗೊಳಿಸುವುದಕ್ಕೂ ಮುನ್ನ, ಸ್ಥಳೀಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಬಿಬಿಎಂಪಿ ಅಧಿಕಾರಿಗಳು, ಕೌನ್ಸಿಲರ್ ಗಳು ಹಾಗೂ ಸಂಬಂಧಪಟ್ಟವರೊಂದಿಗೆ ಸರಣಿ ಸಭೆ ನಡೆಸಲಾಗಿದೆ. ಈ ನಿಯಮವನ್ನು ಹೆಚ್ಚಿನ ಜನರಿಗೆ ತಿಳಿಸಲು ಮಾಧ್ಯಮಗಳಲ್ಲಿ ಜಾಹಿರಾತು ನೀಡಲಾಗುತ್ತಿದೆ ಎಂದಿದ್ದಾರೆ.