2016 ರಲ್ಲಿ ರಾಜ್ಯ ಭೀಕರ ಬರಗಾಲ ಎದುರಿಸಿದ್ದು, ಬರಪೀಡಿತ ತಾಲೂಕುಗಳಿಗೆ 1195 ಕೋಟಿ ಬಿಡುಗಡೆ ಮಾಡಲಾಗಿದೆ. ಬೆಳೆ ಸಹಾಯಧನವನ್ನು ವಿತರಣೆ ಮಾಡಿ, ಬೆಳೆ ವಿಮೆ ಯೋಜನೆಯಡಿಯಲ್ಲಿ 10.5 ಲಕ್ಷ ರೈತರ ನೋಂದಣಿಯಾಗಿದೆ. ಈ ಮೂಲಕ ರಾಜ್ಯ ಸರ್ಕಾರ ಬರಗಾಲವನ್ನು ಪರಿಣಾಮಕಾರಿಯಾಗಿ ಎದುರಿಸಿದೆ. ಕಳೆದ ವರ್ಷದಲ್ಲಿ ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದ್ದು, 2016-17 ನೇ ವರ್ಷದಲ್ಲಿ 1,49, 587 ಕೋಟಿ ರೂಪಾಯಿ ಹೂಡಿಕೆಯಾಗಿದೆ ಎಂದು ರಾಜ್ಯಪಾಲರು ಸರ್ಕಾರದ ಅಭಿವೃದ್ಧಿ ಕ್ರಮಗಳನ್ನು ಶ್ಲಾಘಿಸಿದ್ದಾರೆ.