ಮೈಸೂರು: ಶ್ರೀಗಂಧ ಕಳ್ಳರ ಮೇಲೆ ಶೂಟೌಟ್, ಓರ್ವ ಸಾವು

ಶ್ರೀಗಂಧ ಮರ ಕದಿಯಲು ಬಂದಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಶ್ರೀಗಂಧ ಮರ ಕದಿಯಲು ಬಂದಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸಾವಿಗೀಡಾಗಿದ್ದಾನೆ.

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಲಿಂಗಾಬುದಿ ಕೆರೆ ಆವರಣದಲ್ಲಿ ಮಧ್ಯರಾತ್ರಿ ಎರಡೂವರೆ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಕಾರ್ಯಾಚರಣೆ ಹಿನ್ನೆಲೆಯಲ್ಲಿ ಲಿಂಗಾಬುದಿ ಕೆರೆಯ ಆವರಣಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

೫ ಕ್ಕೂ ಹೆಚ್ಚು ಮಂದಿಯಿದ್ದ ಶ್ರೀಗಂಧ ಚೋರರ ತಂಡ ಮರಕಳವಿಗೆ ಯತ್ನಿಸಿದ ವೇಳೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com