ಗದಗ ಜಿಲ್ಲೆಯಿಂದ ವೆಂಕಟೇಶ್ ದಾಸರ್ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ವಿಭಾಗೀಯ ಪೀಠ ಸಂರಕ್ಷಿತ ಅರಣ್ಯದ ಸ್ಥಾನಮಾನ ನೀಡುವ ಸಂಬಂಧ ‘ಕಳೆದ ತಿಂಗಳ 16ರಂದು ನಡೆದ ಸಾರ್ವಜನಿಕ ಸಮಾಲೋಚನಾ ಸಭೆಯ ನಿರ್ಧಾರವನ್ನು ಆಧರಿಸಿ ಸರ್ಕಾರ ಯಾವುದೇ ತೀರ್ಮಾನ ಕೈಗೊಳ್ಳಬಾರದು’ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.