ಮಾರ್ಚ್ 15ಕ್ಕೆ ರಾಜ್ಯ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಮಾರ್ಚ್ 15 ಕ್ಕೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 15 ರಿಂದ ಮಾರ್ಚ್ 28ರ ವರಗೆ ಬಜೆಟ್ ಅಧಿವೇಶನ..
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಾರ್ಚ್ 15 ಕ್ಕೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 15 ರಿಂದ ಮಾರ್ಚ್ 28ರ ವರಗೆ ಬಜೆಟ್ ಅಧಿವೇಶನ ನಡೆಯಲಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ತಮ್ಮ 4ನೇ ಆಯವ್ಯಯ ಮಂಡಿಸಲಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಇನ್ನೂ 14 ತಿಂಗಳಷ್ಟೇ ಬಾಕಿಯಿರುವುದರಿಂದ ಬಜೆಟ್ ಚುನಾವಣೆಗೆ ಪೂರಕವಾಗಿರಲಿದೆ.

2016-17 ನೇ ಸಾಲಿನಲ್ಲಿ 1.63 ಲಕ್ಷ ಕೋಟಿ ಮೊತ್ತದ ಬಜೆಟ್ ಸಿದ್ದರಾಮಯ್ಯ ಮಂಡಿಸಲಿದ್ದಾರೆ.  2 ಲಕ್ಷ ಕೋಟಿ ಬಜೆಟ್ ಗಾತ್ರವಾಗಿದೆ.

ಸಿದ್ದರಾಮಯ್ಯ ರೈತರ ಸಾಲಮನ್ನಾ ಯೋಜನೆ ಬಜೆಟ್ ನಲ್ಲಿ ತರುವ ಉದ್ದೇಶ ಹೊಂದಿದ್ದಾರೆ. ಇದರಿಂದ ಬರದಿಂದ ಕಂಗೆಟ್ಟಿರುವ ರೈತರಿಗೆ ರೀಲೀಫ್ ಸಿಗಲಿದೆ. ಒಟ್ಟಾರೆ 12ನೇ ಬಜೆಟ್ ಅನ್ನು ಸಿದ್ದರಾಮಯ್ಯ ಮಂಡಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com