ಈ ಬಗ್ಗೆ ಕೃಷಿ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದು, ಬಾಕಿ ಇರುವ ಮೊತ್ತವನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಭರವಸೆ ನೀಡಿದ್ದಾರೆ. ಒಟ್ಟು 1,682 ಕೋಟಿ ರೂಪಾಯಿ ಪೈಕಿ ಕೇಂದ್ರ ಸರ್ಕಾರ ನೀಡಿರುವ 450 ಕೋಟಿ ರೂಪಾಯಿಯನ್ನು ಪರಿಹಾರ ಧನವಾಗಿ ಈಗಲೇ ವಿತರಿಸಿದರೆ ಪರಿಹಾರ ಸಿಗದೇ ಇರುವವರು ಅಸಮಾಧಾನಗೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬಾಕಿ ನೀಡಬೇಕಿರುವ ಹಣವನ್ನು ನೀಡಿದರೆ ಶೀಘ್ರವೇ ಎಲ್ಲ ಫಲಾನುಭವಿಗಳಿಗೂ ಪರಿಹಾರ ಧನ ನೀಡಬಹುದೆಂಬುದನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ.