ಹುನಗುಂದದಲ್ಲಿ ಪ್ರತಿಭಟನೆ ವೇಳೆ ಸಚಿವೆ ಉಮಾಶ್ರೀ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಗರಿಷ್ಠ ಮೌಲ್ಯದ ನೋಟು ನಿಷೇಧ ಖಂಡಿಸಿ ಬಾಗಲಕೋಟೆ ಜಿಲ್ಲೆ ಹುನಗುಂದದಲ್ಲಿ ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಮಹಿಳಾ...
ಉಮಾಶ್ರೀ
ಉಮಾಶ್ರೀ
Updated on
ಬಾಗಲಕೋಟೆ: ಗರಿಷ್ಠ ಮೌಲ್ಯದ ನೋಟು ನಿಷೇಧ ಖಂಡಿಸಿ ಬಾಗಲಕೋಟೆ ಜಿಲ್ಲೆ ಹುನಗುಂದದಲ್ಲಿ ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಅಸ್ವಸ್ಥಗೊಂಡಿದ್ದು, ಅವರನ್ನು ಕೂಡಲೇ ತಾಲೂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮೆರವಣಿಗೆ ಮೂಲಕ ಪ್ರತಿಭಟನಾ ವೇದಿಕೆಗೆ ಬರುತ್ತಿದ್ದ ಸಚಿವೆ ಉಮಾಶ್ರೀ ಅವರು ಅಸ್ವಸ್ಥಗೊಂಡಿದ್ದರು, ಕೂಡಲೇ ಅವರನ್ನು ಹುನಗುಂದದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಹುನಗುಂದ ತಾಲೂಕು ವೈದ್ಯಾಧಿಕಾರಿ ಡಾ.ಕುಸುಮಾ ಅವರು, ಸಚಿವೆ ಉಮಾಶ್ರೀ ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com