ಇನ್ನು ಹುಬ್ಬಳ್ಳಿಯಲ್ಲೂ ಅಕ್ರಮ ಸಂಪಾದನೆ ಮಾಡಿರುವ ಅಧಿಕಾರಿಗಳಿಗೆ ಎಸಿಬಿ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದು, ವಿಶ್ವೇಶ್ವರ ನಗರದಲ್ಲಿರುವ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಕರಿಯಪ್ಪ ಕರ್ನಲ್ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿ, ಮಹತ್ವದ ದಾಖಲೆಗಳಾನ್ನು ವಶಪಡಿಸಿಕೊಂಡಿರುವುದರ ಬಗ್ಗೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.