ಮೇಯರ್ ಸ್ಥಾನಕ್ಕೆ ಸಚಿವ ರಮೇಶ್ ಜಾರಕಿಹೊಳಿ ಬಣದಿಂದ ಜಯಶ್ರೀ ಪುಷ್ಪಾ ಹಾಗೂ ಶಾಸಕ ಫಿರೋಜ್ ಸೇಠ್ ಬಣದಿಂದ ಪುಷ್ಪಾ ಪರ್ವತಾರಾವ್ ಅವರು ಸ್ಪರ್ಧಿಸಿದ್ದರು. ಅಲ್ಲದೆ ಮತದಾನದ ಸಂದರ್ಭದಲ್ಲಿ ಕನ್ನಡಿಗ ಸಂಸದರಾದ ಪ್ರಕಾಶ್ ಹುಕ್ಕೇರಿ, ಸುರೇಶ್ ಅಂಗಡಿ ಹಾಗೂ ಸಂಜಯ ಪಾಟೀಲ್ ಮತದಾನದಿಂದ ದೂರ ಉಳಿದಿದ್ದರು. ಈ ಮೂವರು ಮತ ಹಾಕಿದ್ದರೆ ಕನ್ನಡಿಗ ಅಭ್ಯರ್ಥಿಯ ಗೆಲುವು ಸಾಧ್ಯವಿತ್ತು ಎನ್ನಲಾಗಿದೆ.