ಪ್ರಚೋದನಕಾರಿ ಹೇಳಿಕೆ: ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ದೂರು ದಾಖಲು

ಕೋಮು ಸೌಹಾರ್ಧತೆಗೆ ಧಕ್ಕೆ ತರುವಂತ ಹೇಳಿಕೆ ನೀಡಿರುವ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ದೂರು...
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಮಂಗಳೂರು: ಕೋಮು ಸೌಹಾರ್ಧತೆಗೆ ಧಕ್ಕೆ ತರುವಂತ ಹೇಳಿಕೆ ನೀಡಿರುವ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ದೂರು ದಾಖಲಾಗಿದೆ.

ಉಳ್ಳಾಲದಲ್ಲಿ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಅದರ ಒಂದು ಅಂಗವಾಗಿ ಕಾರ್ತಿಕ್‌ ರಾಜ್‌ ಕೊಲೆಯಾಗಿದೆ. ಹತ್ತು ದಿನಗಳೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಪೊಲೀಸ್‌ ಠಾಣೆಯ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು; ಈ ನಿಟ್ಟಿನಲ್ಲಿ ಜಿಲ್ಲೆಗೆ ಬೆಂಕಿ ಹಾಕಲೂ ಸಿದ್ಧ ಎಂದು ಹೇಳಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಾಕಲು ಸಿದ್ಧ ಎಂಬ ಕಟೀಲು ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹೇಳಿಕೆ ಸಂಬಂಧ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸೋಮವಾರ ದೂರು ದಾಖಲಿಸಿದೆ.

ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪಜೀರು ಸುದರ್ಶನ ನಗರ ನಿವಾಸಿ ಕಾರ್ತಿಕ್‌ರಾಜ್‌ ಹತ್ಯೆ ಆರೋಪಿಗಳ ಪತ್ತೆಗೆ ಆಗ್ರಹಿಸಿ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಪಜೀರು ಸುದರ್ಶನ ನಗರದಿಂದ ಕೊಣಾಜೆ ಠಾಣೆಯ ವರೆಗೆ ನಡೆದ ಮೌನ ಜಾಥಾದ ಸಭೆಯಲ್ಲಿ ಭಾಗವಹಿಸಿ ಕಟೀಲು ಮಾತನಾಡಿದ ಸಂದರ್ಭ ಈ ಹೇಳಿಕೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com