ಇಂದು ಧಾರವಾಡದಲ್ಲಿ ಡಿಸೆಂಬರ್ 31ರಂದು ಮಧ್ಯರಾತ್ರಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಮಾತೆ ಮಹಾದೇವಿ, ಹೆಣ್ಣುಮಕ್ಕಳು ಹೊಸ ವರ್ಷದ ಹೆಸರಿನಲ್ಲಿ ಈ ರೀತಿಯ ಸ್ವೇಚ್ಛಾಚಾರದ ವರ್ತನೆ ತೋರುವುದು ಅವಮಾನಕರ. ಇಂಥ ಪ್ರಕರಣಗಳು ನಿಲ್ಲಬೇಕಾದರೆ ಹೆಣ್ಣಮಕ್ಕಳು ಮೈ ತುಂಬಾ ಬಟ್ಟೆ ಧರಿಸಬೇಕು. ಈ ಸಂಬಂಧ ಸರ್ಕಾರ ವಸ್ತ್ರಸಂಹಿತೆ ಜಾರಿಗೆ ತರಬೇಕು. ಅತ್ಯಾಚಾರಗಳು ಹೆಚ್ಚಾಗುವಲ್ಲಿ ಅರ್ಧ ತಪ್ಪು ಹೆಣ್ಣು ಮಕ್ಕಳದು, ಇನ್ನರ್ಧ ತಪ್ಪು ಸಮಾಜದ್ದು ಎಂದರು.