ಬೆಳ್ತಂಗಡಿಯಲ್ಲಿ ಒಂದೇ ಕುಟುಂಬದ ನಾಲ್ವರು ನೀರುಪಾಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ನಡ ಗ್ರಾಮದ ಅಂತ್ರಾಯಿಪಲ್ಕೆ ಹೊಳೆಯಲ್ಲಿ ಮುಳುಗಿ ಒಂದೇ ಕುಟುಂಬದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ನಡ ಗ್ರಾಮದ ಅಂತ್ರಾಯಿಪಲ್ಕೆ ಹೊಳೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿರುವ ದಾರುಣ ಘಟನೆ ಬುಧವಾರ ನಡೆದಿದೆ.
ಮೃತರು ಉಡುಪಿ ಜಿಲ್ಲೆಯ ಕಾಪು ಫಕೀರನಕಟ್ಟೆ ನಿವಾಸಿಗಳಾದ ರಹೀಮ್30), ಪತ್ನಿ ರುಬೀನಾ(25), ಯಾಸ್ಮಿನ್(23), ಸುಬಾನ್(15) ಎಂದು ಗುರುತಿಸಲಾಗಿದ್ದು, ನಾಲ್ವರ ಮೃತದೇಹ ಹೊರ ತೆಗೆಯಲಾಗಿದೆ.
ನೀರಿನಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ಮಹಿಳೆ ಮೈಮೂನಾ ಎಂಬುವವರನ್ನು ಸ್ಥಳೀಯರು ರಕ್ಷಿಸಿದ್ದು, ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಳಗ್ಗೆ ಇಲ್ಲಿನ ಪ್ರಸಿದ್ಧ ಕಾಜೂರು ದರ್ಗಾಕ್ಕೆ ಭೇಟಿ ನೀಡಿದ್ದ ಕುಟುಂಬ ವಾಪಸ್ ಬರುವಾಗ ಹೊಳೆಯಲ್ಲಿ ಸ್ನಾನಕ್ಕೆ ಇಳಿದಾಗ ಈ ಅವಘಡ ಸಂಭವಿಸಿದೆ.
ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com