ವಿದ್ಯಾರ್ಥಿ ಅಭಿಷೇಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಎಬಿವಿಪಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ನೇರ ಆರೋಪ ಮಾಡಿದ್ದು, ರಾಜ್ಯ ಸರ್ಕಾರ ತನ್ನ ಪ್ರಭಾವವನ್ನು ಬಳಸಿ ಎಬಿವಿಪಿ ಕಾರ್ಯಕರ್ತರ ಮೇಲೆ ಕೇಸು ದಾಖಲಿಸಿದ್ದಾರೆ. ಇದರಿಂದ ಖಿನ್ನತೆಗೆ ಒಳಗಾಗಿ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದು ಜ.11 ಹಾಗೂ 12 ರಂದು ಪ್ರತಿಭಟನೆ ಹೋರಾಟಕ್ಕೆ ಮಾಡುವುದಾಗಿ ಎಬಿವಿಪಿ ತಿಳಿಸಿದೆ.