2016-17ನೇ ಸಾಲಿನ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿಗೆ ದೇಶದ ಹೆಮ್ಮೆಯ ಸಾರಿಗೆ ಸಂಸ್ಥೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ) ಭಾಜನವಾಗಿದೆ.
ಕೇಂದ್ರ ಸರ್ಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ ಆಂಧ್ರಪ್ರದೇಶದ ವಿಶಾಖಪಟ್ಟಣನಲ್ಲಿ ಹಮ್ಮಿಕೊಂಡಿದ್ದ 20ನೇ ರಾಷ್ಟ್ರೀಯ ಇ-ಆಡಳಿತ ಸಮ್ಮೇಳನದಲ್ಲಿ ಕೆಎಸ್ಆರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದ್ರ ಕುಮಾರ್ ಕಟಾರಿಯ ಅವರು ಕೇಂದ್ರ ಸಚಿವ ಪಿಪಿ ಚೌದರಿ ಅವರಿಂದ ಪ್ರಶಸ್ತಿ ಪಡೆದರು.
ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ ಪಡೆಯುತ್ತಿರುವ ದೇಶದ ಮೊದಲ ಸಾರಿಗೆ ಸಂಸ್ಥೆ ಎಂಬ ಖ್ಯಾತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಭಾಜನವಾಗಿದೆ.