ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ , ನಮ್ಮ ಸಂಸ್ಥೆಗೆ ಇಷ್ಟೆಲ್ಲ ಪ್ರಶಸ್ತಿ ಬಂದಿರುವುದು ಹೆಮ್ಮೆಯ ವಿಚಾರ.ಹೀಗಾಗಿ ಬಸ್ ಸೇವೆಯನ್ನು ಮತ್ತಷ್ಟು ಜನಸ್ನೇಹಿ ಮಾಡಲು ಹಲವಾರು ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದರು. ಕೆಎಸ್ಆರ್ಟಿಸಿ ಸಂಸ್ಥೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 2015-16ನೆ ಸಾಲಿನಲ್ಲಿ 114.95 ಕೋಟಿ ರೂ. ಲಾಭ ಗಳಿಸಿದೆ. ಇದರಲ್ಲಿ ಸಂಸ್ಥೆ ಸಿಬ್ಬಂದಿ ನಿವೃತ್ತಿ ಸಮಯದಲ್ಲಿ ಆರ್ಥಿಕ ಮುಗ್ಗಟ್ಟು ಉಂಟಾಗಬಹುದೆಂಬ ಉದ್ದೇಶದಿಂದ 64 ಕೋಟಿ ರೂ.ಗಳನ್ನು ಗ್ರ್ಯಾಚುಟಿ ನಿಧಿಗೆ ಜಮೆ ಮಾಡಲಾಗಿದೆ ಎಂದರು.