ಇಂದು ಮಧ್ಯಾಹ್ನ ಮಾಲ್ ಹಿಂಬದಿ ಗೋಡೆ ಕುಸಿದು ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮಂಜುನಾಥ್ ಅವರು, ಸಾರ್ವಜನಿಕರ ಹಿತ ದೃಷ್ಟಿಯಿಂದ ಈ ಕ್ಷಣದಿಂದಲೇ ಮಾಲ್ ಆಕ್ಯುಪೆನ್ಸಿ ಪ್ರಮಾಣ ಪತ್ರ ರದ್ದು ಮಾಡಿ, ಸಾರ್ವಜನಿಕ ಪ್ರವೇಶ ಬಂದ್ ಮಾಡಲಾಗುವುದು. ನಂತರ ಕಟ್ಟಡದ ಸ್ಥಿತಿ ಬಗ್ಗೆ ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.