ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ.ಎನ್ ಬೆಟ್ಟೇಗೌಡ ಆಯ್ಕೆ

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಡಿ.ಎನ್.ಬೆಟ್ಟೇಗೌಡ ...
ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ ಡಿ.ಎನ್ ಬೆಟ್ಟೇಗೌಡ ಆಯ್ಕೆ
ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ ಡಿ.ಎನ್ ಬೆಟ್ಟೇಗೌಡ ಆಯ್ಕೆ

ಬೆಂಗಳೂರು:  ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಡಿ.ಎನ್.ಬೆಟ್ಟೇಗೌಡ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷರಾಗಿದ್ದ ಡಾ. ಅಪ್ಪಾಜಿಗೌಡ ಅವರನ್ನು ಕೆಲ ದಿನಗಳ ಹಿಂದೆ ಹುದ್ದೆಯಿಂದ ಪದಚ್ಯುತಗೊಳಿಸಿ ನಿರ್ಣಯ ಕೈಗೊಳ್ಳಲಾಗಿತ್ತು.
ಇಂದು ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಅ.ದೇವೇಗೌಡ, ಡಾ.ಬಿ.ಶಿವಲಿಂಗಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎನ್.ರಾಮಚಂದ್ರ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎ.ಪ್ರಸಾದ್ ಘೋಷಿಸಿದ್ದಾರೆ.

ಖಜಾಂಚಿಯಾಗಿ ಎನ್.ರಮೇಶ್ ಆಯ್ಕೆಯಾಗಿದ್ದಾರೆ. ಒಕ್ಕಲಿಗರ ಸಂಘದ 35 ಮಂದಿ ಸದಸ್ಯರು ಮತ ಚಲಾಯಿಸಿದರು. ಅಪ್ಪಾಜಿಗೌಡ ಕಣದಿಂದ ಹಿಂದೆ ಸರಿದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com