ಬೆಂಗಳೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮಹಿಳೆ ಸಾವು

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಣಸವಾಡಿ ರೈಲ್ವೆ ನಿಲ್ದಾಣದಲ್ಲಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಣಸವಾಡಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಎಲ್ ಅಂಡ್ ಟಿ ಕಂಪನಿ ಉದ್ಯೋಗಿಯ ಎಲೆಕ್ಟ್ರಿಕಲ್ ಎಂಜಿನೀಯರ್ ಲಕ್ಷ್ಮಿ ದೊರೈವರಿ ಮೃತ ಮಹಿಳೆ, ಈಕೆ ಕಳೆದ 8 ವರ್ಷಗಳಿಂದ ಎಲ್ ಅಂಡ್ ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು, ಲಕ್ಷ್ಮಿ ಅವರ ಪತಿ ವೈದ್ಯರಾಗಿದ್ದು ಈ ದಂಪತಿಗೆ ಎರಡು ಹೆಣ್ಣು ಮಕ್ಕಳಿವೆ.

ಹೊಸೂರಿನಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಿ ಬೆಳಗ್ಗೆ 9 ಗಂಟೆಗೆ ಹೊಸೂರು- ಯಶವಂತಪುರ ಡೆಮು ರೈಲುಹತ್ತಿದ್ದಾರೆ. ರೈಲು ಕೆ.ಆರ್ ಪುರಂ ಬಳಿ ಬಂದಾಗ ಲಕ್ಷ್ಮಿ ಇಳಿಯಲು ಯತ್ನಿಸಿದ್ದಾರೆ. ಈ ವೇಳೆ ಕಾಲು ಜಾರಿ ಆಕೆ ಕೆಳಗೆ ಬಿದ್ದಿದ್ದಾರೆ. ಕೂಡಲೇ ಆಕೆಯನ್ನು ಬೆಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣಕ್ಕೆ ಕರೆ ತರಲಾಯಿತು.

 ನಂತರ ರೈಲ್ವೆ ಪೊಲೀಸರು  ಆಕೆಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನೀಡಲು ಇಸಿಜಿ ಮಾಡಲು ಸಿದ್ಧತೆ ನಡೆಸುತ್ತಿದ್ದಾಗ, ಗಾಯಗೊಂಡಿದ್ದ ಆಕೆ ಆಂತರಿಕ ರಕ್ತಸ್ರಾವದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com