ಬೆಂಗಳೂರು: ಮದ್ಯದ ದೊರೆ ವಿಜಯ ಮಲ್ಯ ಅವರ ಸಾಲ ಬಾಕಿ ಪ್ರಕರಣ ಸಂಬಂಧ ಐಡಿಬಿಐ ಬ್ಯಾಂಕ್ ಮಾಜಿ ಮುಖ್ಯಸ್ಥ ಮತ್ತು ಬ್ಯಾಂಕ್ನ ಮೂವರು ಮಾಜಿ ಅಧಿಕಾರಿಗಳು ಮತ್ತು ಕಿಂಗ್ಫಿಷರ್ ಏರ್ಲೈನ್ಸ್ನ ನಾಲ್ವರು ಅಧಿಕಾರಿಗಳು ಸೇರಿ ಒಟ್ಟು 8 ಮಂದಿಯನ್ನು ಸಿಬಿಐ ಬಂಧಿಸಿದೆ.
ಬ್ಯಾಂಕ್ ಅಧ್ಯಕ್ಷರಾಗಿದ್ದ ಯೋಗೇಶ್ ಅಗರ್ವಾಲ್, ಕಿಂಗ್ಫಿಷರ್ ಏರ್ಲೈನ್ಸ್ನ ಮುಖ್ಯ ಹಣಕಾಸು ಅಧಿಕಾರಿಯಾಗಿದ್ದ ಎ. ರಘುನಾಥನ್ ಬಂಧಿತರು ಎಂದು ಸಿಬಿಐ ಮೂಲಗಳು ತಿಳಿಸಿವೆ.
ವಿಜಯ್ ಮಲ್ಯ ಅವರಿಗೆ ಸೇರಿದ ಕಟ್ಟಡಗಳ ಮೇಲೆ ದಾಳಿ ನಡೆಸಿದ ನಂತರ ಸಿಬಿಐ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.
‘ದೆಹಲಿಯಿಂದ ಬಂದ ಸಿಬಿಐ ಅಧಿಕಾರಿಗಳ ತಂಡ ಬೆಂಗಳೂರಿನಲ್ಲಿರುವ ಯುಬಿ ಗ್ರೂಪ್ನ ಕಚೇರಿಗಳಿಗೆ ಭೇಟಿ ನೀಡಿದೆ’ ಎಂದು ಸಿಬಿಐ ಹಿರಿಯ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.
ಯುಬಿ ಕಚೇರಿಗಳಿಗೆ ಸಿಬಿಐ ಅಧಿಕಾರಿಗಳು ಭೇಟಿ ನೀಡಿರುವುದು ನಿಜ. ನಾವು ಎಲ್ಲ ರೀತಿಯಲ್ಲೂ ಸಹಕರಿಸಿದ್ದೇವೆ ಎಂದು ವಕ್ತಾರ ಸ್ಪಷ್ಟಪಡಿಸಿದ್ದಾರೆ.
Advertisement