ಪ್ರವಾಸಿಗರು ಮತ್ತು ಪರಿಸರವಾದಿಗಳು ನಂದಿಬೆಟ್ಟಕ್ಕೆ (ತಪ್ಪಲಿನಿಂದ ತುದಿಗೆ) ಖಾಸಗಿ ಬಸ್ಸುಗಳನ್ನು ನಿಷೇಧಿಸಲು ಒತ್ತಾಯಿಸಿರುವುದರಿಂದ, ಈ ವಿಷಯವಾಗಿ ಕೆ ಎಸ್ ಆರ್ ಟಿ ಸಿ, ಪ್ರವಾಸೋದ್ಯಮ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳದೆ ಎಂದು ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದರ್ ಕುಮಾರ್ ಕಟಾರಿಯಾ ಹೇಳಿದ್ದಾರೆ. ಅವರು ಚಿಕ್ಕಬಳ್ಳಾಪುರ ವಿಭಾಗೀಯ ಅಧಿಕಾರಿ ಮತ್ತು ನಂದಿ ಬೆಟ್ಟದ ವಿಶೇಷ ಅಧಿಕಾರಿ ರಮೇಶ್ ಅವರೊಂದಿಗೆ ಚರ್ಚೆ ಕೂಡ ನಡೆಸಿದ್ದಾರೆ.