ಕೋರ್ಟ್ ನಲ್ಲಿ ಮೊಕದ್ದಮೆ ದಾಖಲಿಸುವುದಕ್ಕೂ ಮುನ್ನ ಚೆಕ್ ನ್ನು ವಾಪಸ್ ಕಳಿಸಿರುವ ಬಗ್ಗೆ ಐಸಿಐಸಿಐ ಬ್ಯಾಂಕ್ ಹಾಗೂ ಎಲ್ಐಸಿಯಿಂದ ಸ್ಪಷ್ಟನೆ ಕೇಳಿದ್ದ ಆನಂದ್ ದಿವಾಕರ್ ಗೆ ಕನ್ನಡದಲ್ಲಿ ಚೆಕ್ ನ್ನು ತುಂಬಿದ್ದರಿಂದ ವಾಪಸ್ ಕಳಿಸಲಾಗಿದೆ ಎಂಬ ಉತ್ತರ ಬಂದಿದೆ. ನಂತರ ಆನಂದ್ ದಿವಾಕರ್ ಗರಗ್ ಗ್ರಾಹಕ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ಕೋರ್ಟ್ ಈಗ ಎಲ್ಐಸಿ, ಐಸಿಐಸಿಐ, ಕಾರ್ಪೊರೇಷನ್ ಬ್ಯಾಂಕ್ ಗಳಿಗೆ ನೊಟೀಸ್ ಜಾರಿ ಮಾಡಿ ವಿಚಾರಣೆಯನ್ನು ಫೆ.28 ಕ್ಕೆ ಮುಂದೂಡಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮೂಲಕ ತಿಳಿದುಬಂದಿದೆ.