ಸಾಂದರ್ಭಿಕ ಚಿತ್ರ
ರಾಜ್ಯ
ಮೈಸೂರು: ಪೋಲೀಸ್ ಜೀಪ್ ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ, ಇನ್ಸ್ ಪೆಕ್ಟರ್, ಪೇದೆ ಸಾವು
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ ಟಿಸಿ) ಬಸ್ಸೊಂದು ಎದುರಗಡೆಯಿಂದ ಬರುತ್ತಿದ್ದ ಪೋಲೀಸ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ...
ಮೈಸೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ ಟಿಸಿ) ಬಸ್ಸೊಂದು ಎದುರಗಡೆಯಿಂದ ಬರುತ್ತಿದ್ದ ಪೋಲೀಸ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಇನ್ಸ್ ಪೆಕ್ಟರ್ ಹಾಗೂ ಓರ್ವ ಪೊಲೀಸ್ ಪೇದೆ ಮೃತಪಟ್ಟಿರುವ ಹಾಗೂ ಇಬ್ಬರು ಪೇದೆಗಳು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಶನಿವಾರ ಮೈಸೂರು-ಟಿ.ನರಸೀಪುರ ರಸ್ತೆಯಲ್ಲಿ ನಡೆದಿದೆ.
ಜೀಪ್ ನಲ್ಲಿದ್ದ ಮೈಸೂರು ಜಿಲ್ಲಾ ಅಪರಾಧ ತನಿಖಾ ದಳದ ಇನ್ಸ್ ಪೆಕ್ಚರ್ ಮಹೇಶ್ ಕುಮಾರ್ ಹಾಗೂ ಜೀಪ್ ಚಾಲನೆ ಮಾಡುತ್ತಿದ್ದ ಪೇದೆ ಲಕ್ಷ್ಮಣ್ ಮೃತಪಟ್ಟ ದುರ್ದೈವಿಗಳು. ಲಕ್ಷ್ಮಣ್ ಸ್ಥಳದಲ್ಲೇ ಮೃತಪಟ್ಟಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹೇಶ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಂದು ಮಧ್ಯಾಹ್ನ ಮೈಸೂರಿನಿಂದ ಸುತ್ತೂರು ಕಡೆ ತೆರಳುತ್ತಿದ್ದ ಪೊಲೀಸ್ ಜೀಪ್ ಗೆ ಟಿ.ನರಸೀಪುರದಿಂದ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಅಪಘಾತ ತೀವ್ರತೆಗೆ ಪೊಲೀಸ್ ಜೀಪ್ ನಜ್ಜು ಗುಜ್ಜಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ