ಈ ಮಧ್ಯೆ, ನೈರುತ್ಯ ರೈಲ್ವೆ ಪ್ರಕಟಣೆ ಹೊರಡಿಸಿದ್ದು, ಭಯೋತ್ಪಾದಕರು, ಮಾವೋವಾದಿಗಳು ಮತ್ತು ಇತರ ಬಂಡುಕೋರ ಗುಂಪುಗಳ ಚಟುವಟಿಕೆಗಳು, ಚಲನವಲನಗಳ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ವಿಧ್ವಂಸಕ ಕೃತ್ಯಗಳ ಪೀಡಿತ ಪ್ರದೇಶಗಳಲ್ಲಿ ಪಹರೆ ಕಾಯಲು ಮತ್ತು ರೈಲ್ವೆ ಹಳಿಗಳ ಪಕ್ಕ ಗಸ್ತು ತಿರುಗಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಬೆಂಗಳೂರು, ಯಶವಂತಪುರ ಮತ್ತು ಮೈಸೂರು ರೈಲು ನಿಲ್ದಾಣಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸಿಸಿಟಿವಿ ಕ್ಯಾಮರಾ ಮೂಲಕ ಗಮನಿಸಲಾಗುತ್ತಿದೆ ಎಂದು ಹೇಳಿಕೆ ತಿಳಿಸಿದೆ.