ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯೊಂದಿಗೆ ಮಾತನಾಡಿದ ಮೈಸೂರು ಮೃಗಾಲಯದ ಕಾರ್ಯಕಾರಿ ನಿರ್ದೇಶಕ ಕೆ. ಕಮಲಾ, ಭೋಪಾಲ್ ಸಂಸ್ಥೆ ನೀಡಿರುವ ವರದಿಗಳ ಫಲಿತಾಂಶ ಬಗ್ಗೆ ವಿಶ್ಲೇಷಣೆ ಮಾಡಲು ಬೆಂಗಳೂರಿನಲ್ಲಿ ಇಂದು 11 ಗಂಟೆಗೆ ಸಭೆ ಕರೆಯಲಾಗಿದೆ. ಪಶುಸಂಗೋಪನಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಬಹುಶಃ ಇನ್ನು ಒಂದೆರಡು ದಿನಗಳಲ್ಲಿ ಮೃಗಾಲಯ ತೆರೆಯಬಹುದು ಎಂದು ಹೇಳಿದ್ದಾರೆ.