ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಿ: ಸಿಎಂ ಗೆ ಜಿ. ಮಾದೇಗೌಡ ಆಗ್ರಹ

ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಮಂಡ್ಯದ ಹಲವು ಭಾಗಗಳಲ್ಲಿ ರೈತರು ರಸ್ತೆ ತಡೆ ನಡೆಸುವ ಮೂಲಕ ...
ಸಿದ್ದರಾಮಯ್ಯ ಮತ್ತು ಜಿ. ಮಾದೇಗೌಡ
ಸಿದ್ದರಾಮಯ್ಯ ಮತ್ತು ಜಿ. ಮಾದೇಗೌಡ
ಮೈಸೂರು:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಮಂಡ್ಯದ ಹಲವು ಭಾಗಗಳಲ್ಲಿ ರೈತರು ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ  ನಡೆಸಿದರು.
ಈ ವೇಳೆ ಮಾತನಾಡಿದ  ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಜಿ. ಮಾದೇಗೌಡ ಸೋಮವಾರದಿಂದ ತಾವು ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ.
ಸಮಿತಿಯು ಸಭೆ ಸೇರಿ ಮುಂದಿನ ಹಂತದ ಹೋರಾಟದ ಬಗ್ಗೆ ರೂಪು ರೇಷೆ ಸಿದ್ದಪಡಿಸಲಾಗುವುದು ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ತಮಿಳುನಾಡಿಗೆ ನೀರು ಬಿಡುತ್ತಿರುವ ಸಂಬಂಧ ಮೌನವಾಗಿರುವುದನ್ನು ಬಿಟ್ಟು ಕೂಡಲೇ ನೀರು ಬಿಡದಂತೆ ಕ್ರಮ  ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಕಾವೇರಿ ನ್ಯಾಯಮಂಡಳಿ ಸೂಚನೆ ಮೇರೆಗೆ ತಮಿಳುನಾಡಿಗೆ ನೀರು ಬಿಡುತ್ತಿರುವುದಾಗಿ ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ನೀಡಿದ್ದಾರೆ. ಆದರೆ ಮಳೆಯಿಲ್ಲದೇ, ಜಲಾಶಯ ಬರಿದಾಗಿರುವ ಸಮಯದಲ್ಲೂ ತಮಿಳುನಾಡಿಗೆ ನೀರು ಬಿಡಬೇಕು ಎಂದು ನ್ಯಾಯಮಂಡಳಿ ಸೂಚಿಸಿದೆಯೇ ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com