ಮೊದಲ ತಂಡದಲ್ಲಿ 40 ಕಾರ್ಮಿಕರು ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದು, ಅದರಲ್ಲಿ ಕೇವಲ 3 ಮಂದಿ ಮಾತ್ರ ಮಹಿಳಾ ಪೌರ ಕಾರ್ಮಿಕರು ತೆರಳುತ್ತಿದ್ದಾರೆ. ಜುಲೈ 4 ರಂದು ತೆರಳುವ ಮೊದಲ ತಂಡ 5 ದಿನಗಳ ಪ್ರವಾಸ ಕೈಗೊಳ್ಳಲಿದೆ. ಶ್ರೀರಂಗಪಟ್ಟಣ ಟೌನ್ ಮುನಿಸಿಪಲ್ ಕೌನ್ಸಿಲ್, ಎಂಜಿನೀಯರ್, ಅಶ್ವಿನಿ ಬಿ,ಜೆ , ಅಳಾನವರ್ ಪಟ್ಟಣ ಪಂಚಾಯ್ತಿ ಕಾರ್ಮಿಕರಾದ ಸಾವಿತ್ರಿ ಗುಟ್ಟಿ, ಮಂಗಳೂರು ಸಿಟಿ ಕಾರ್ಪೋರೇಷನ್ ನಿಂದ ವಿಜಯಲಕ್ಷಿ ಪ್ರವಾಸಕ್ಕೆ ತೆರಳುತ್ತಿದ್ದಾರೆ.