ಹೊಸೂರಿನ ಮುನಿಯಪ್ಪನ್ ಕೆಲ ವರ್ಷಗಳ ಹಿಂದೆ ಚೆಮ್ಮನೂರು ಜ್ಯುವೆಲರ್ಸ್ನಲ್ಲಿ ಕೆಲಸಕ್ಕೆ ಸೇರಿದ್ದರು. ಒಂದು ಶಾಖೆಯಿಂದ ಮತ್ತೊಂದು ಶಾಖೆಗೆ ಚಿನ್ನದ ಬಿಸ್ಕತ್ ಸರಬರಾಜು ಮಾಡುವ ಜವಾಬ್ದಾರಿಯನ್ನು ಅವರು ವಹಿಸಿಕೊಂಡಿದ್ದರು. ಫೆಬ್ರವರಿ 20ರಂದು ಅಂಗಡಿಯ ಮಾಲೀಕರು 1 ಕೆ.ಜಿಯ ನಾಲ್ಕು ಚಿನ್ನದ ಬಿಸ್ಕತ್ಗಳನ್ನು ತಮಿಳುನಾಡಿನ ಕೊಯಮತ್ತೂರಿನ ಶಾಖೆಗೆ ತಲುಪಿಸುವಂತೆ ಕೊಟ್ಟಿದ್ದರು. ಚಿನ್ನದ ಬಿಸ್ಕತ್ ಇದ್ದ ಬ್ಯಾಗ್ ಸಮೇತ ಮುನಿಯಪ್ಪನ್, ಪತ್ನಿ ಜತೆ ಬಸ್ ಹತ್ತಿದ್ದರು.