ನಿನ್ನೆ ಸಂಜೆ 4.30ರ ಸುಮಾರಿಗೆ ಪಾಪರೆಡ್ಡಿ ಪಾಳ್ಯದ ಆರ್ಚಿಸ್ ಸ್ಕೂಲ್ ಬಳಿ ಈ ಘಟನೆ ನಡೆದಿದ್ದು, ಮಾನಸ ಕಾಲೇಜ್ ನಿಂದ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಭಗ್ನ ಪ್ರೇಮಿ, ತನ್ನನ್ನು ಮಾತ್ರ ಪ್ರೀತಿಸಬೇಕು ಎಂದು ಒತ್ತಾಯಿಸಿದ್ದಾನೆ. ಆದರೆ ಇದಕ್ಕೆ ನಿರಾಕರಿಸಿದ ಯುವತಿಯ ತೋಳು ಮತ್ತು ಭುಜಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.