ಮೈಸೂರು, ಮಂಡ್ಯ, ಚಾಮರಾಜನಗರ ಇತ್ಯಾದಿ ಜಿಲ್ಲೆಗಳಲ್ಲಿ ಬೀಜ ಬಿತ್ತನೆ ಏಪ್ರಿಲ್, ಮೇ ತಿಂಗಳಲ್ಲಿ ನಡೆದಿದೆ.ಈ ವರ್ಷ ಜೂನ್ 7ಕ್ಕೆ ಮುಂಗಾರು ರಾಜ್ಯವನ್ನು ಪ್ರವೇಶಿಸಿದ್ದು ಎಲ್ಲಾ ಜಿಲ್ಲೆಗಳನ್ನು ತಲುಪುವ ಹೊತ್ತಿಗೆ ಜೂನ್ 12 ಆಗಿತ್ತು. ಆದರೆ ಮಳೆ ಎಲ್ಲಾ ಕಡೆ ಸಾಕಷ್ಟು ಬಿದ್ದಿಲ್ಲ. ಮೊನ್ನೆ ಶುಕ್ರವಾರದ ಅಂಕಿಅಂಶ ಪ್ರಕಾರ, 18 ಜಿಲ್ಲೆಗಳಲ್ಲಿ ಈ ವರ್ಷ ಮಳೆಯ ಕೊರತೆ ಕಂಡುಬಂದಿದೆ. 176 ತಾಲ್ಲೂಕುಗಳಲ್ಲಿ 104 ತಾಲ್ಲೂಕುಗಳಲ್ಲಿ ಮಳೆಯ ಕೊರತೆಯಾಗಿದೆ. ಗದಗ, ಹಾವೇರಿ, ಬೆಳಗಾವಿ, ಬಳ್ಳಾರಿ ಮತ್ತು ಧಾರವಾಡಗಳಲ್ಲಿ ಮಳೆಯ ಕೊರತೆ ತೀವ್ರವಾಗಿದೆ.