ಕನಕಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಕ್ಯಾಂಟರ್ ಡಿಕ್ಕಿ: ಸ್ಧಳದಲ್ಲೇ ಐವರ ಸಾವು

ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಕನಕಪುರದ ತೊಪ್ಪಗಾನಹಳ್ಳಿಯಲ್ಲಿ ..
ಕ್ಯಾಂಟರ್ ಗೆ ಡಿಕ್ಕಿ ಹೊಡೆದಿರುವ ಕಾರು
ಕ್ಯಾಂಟರ್ ಗೆ ಡಿಕ್ಕಿ ಹೊಡೆದಿರುವ ಕಾರು
ಬೆಂಗಳೂರು: ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಕನಕಪುರದ ತೊಪ್ಪಗಾನಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರು ಕನಕಪುರ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು ಕಾರು ಕನಕಪುರದಿಂದ ಬೆಂಗಳೂರಿನ ಕಡೆ ಸಂಚರಿಸುತ್ತಿದ್ದು ಎನ್ನಲಾಗಿದೆ. 
ವಿದ್ಯಾರಣ್ಯಪುರ ನಿವಾಸಿ ಚಂದ್ರು  ಮತ್ತು ಚಾಲಕ ಆಂದ್ರಪ್ರದೇಶದ ರಾಜು ಎಂಬ ಇಬ್ಬರ ಶವಗಳನ್ನು ಪೊಲೀಸರು ಗುರುತು ಪತ್ತೆ ಹಚ್ಚಿದ್ದಾರೆ. ಉಳಿದ ಮೂವರ ಗುರುತು ಪತ್ತೆಯಾಗಿಲ್ಲ.
ಸಂಜೆ ಸುಮಾರು 7.30 ರ ವೇಳೆಗೆ ಕಾರು ಬೆಂಗಳೂರು ಕಡೆಗೆ ಸಂಚರಿಸುತ್ತಿತ್ತು, ಎದುರಿನಿಂದ ಕ್ಯಾಂಟರ್ ಕಾರಿಗೆ ಬಂದು ಅಪ್ಪಳಿಸಿದೆ, ಅಪ್ಪಳಿಸಿದ ರಭಸಕ್ಕೆ ಕಾರು ಕ್ಯಾಂಟರ್ ಕೆಳಗೆ ಸಿಲುಕಿದೆ, ನಂತರ ಅರ್ಥ್ ಮೂವರ್ ನಿಂದ ವಾಹನಗಳ ಭಾಗಗಳನ್ನು ಬಿಡಿ ಬಿಡಿಯಾಗಿಸಿ ನಂತರ ಶವಗಳನ್ನು ಹೊರ ತೆಗೆಯಲಾಗಿದೆ.
ಶವಗಳನ್ನು ಹೊರತೆಗೆಯಲು 1 ಗಂಟೆಗೂ ಅಧಿಕ ಸಮಯ ಬೇಕಾಯಿತು.  ಮೊಬೈಲ್ ಏನು ಇಲ್ಲದ ಕಾರಣ ಉಳಿದ ಮೂವರು ಶವಗಳ ಗುರುತು ಪತ್ತೆ ಹಚ್ಚುವುದು ತುಂಬಾ ಕಷ್ಟದ ಕೆಲಸವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.  ಶವಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.  ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com