ಬೆಂಗಳೂರು:ಕೆಂಪೇಗೌಡ ಮೆಟ್ರೊ ನಿಲ್ದಾಣದಿಂದ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳಿಗೆ ಸಂಪರ್ಕಿಸುವ ಪ್ರಯಾಣಿಕರ ಸಂಚಾರ ಕಾರಿಡಾರ್ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಭೂಮಿಯನ್ನು ನೀಡಲಿದೆ. ಮೆಟ್ರೊ, ಬಿಎಂಟಿಸಿ, ಕೆಎಸ್ಆರ್ ಟಿಸಿ ಮತ್ತು ಸಂಚಾರ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ನಿನ್ನೆ ಈ ನಿರ್ಧಾರ ತೆಗೆದುಕೊಳ್ಳಲಾಯಿತು.