ಜನತಾ ದರ್ಶನದಲ್ಲಿ ಕಾಯಿಲೆಯಿಂದ ಬಳಲುತ್ತದ್ದ ವೃದ್ಧನಿಗೆ ಸಿಎಂ ಸಿದ್ದರಾಮಯ್ಯ ಧನಸಹಾಯ

ಕಾಲು ನೋವಿನಿಂದ ಬಳಲುತ್ತಿದ್ದ ವೃದ್ಧನೋರ್ವನಿಗೆ ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪಾಕೆಟ್ ನಲ್ಲಿದ್ದ ಹಣ ನೀಡಿ ಸಹಾಯ ಮಾಡಿದ್ದಾರೆ..
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಕಾಲು ನೋವಿನಿಂದ ಬಳಲುತ್ತಿದ್ದ ವೃದ್ಧನೋರ್ವನಿಗೆ ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪಾಕೆಟ್ ನಲ್ಲಿದ್ದ ಹಣ ನೀಡಿ ಸಹಾಯ ಮಾಡಿದ್ದಾರೆ.
ಬುಧವಾರ ಬೆಳಗ್ಗೆ  ತಮ್ಮ ನಿವಾಸದಲ್ಲಿ ಸುಮಾರು 100 ಮಂದಿಯನ್ನು ಸಿಎಂ ಜನತಾ ದರ್ಶನದಲ್ಲಿ ಭೇಟಿ ಮಾಡಿದರು. ಈ ವೇಳೆ 70 ವರ್ಷದ ವೃದ್ಧನೋರ್ವ ನೋವಿನಿಂದ ಬಳಲುತ್ತಿದ್ದದ್ದನ್ನು ಗಮನಿಸಿದ ಸಿಎಂ ಆತನಿಗೆ ಸಹಾಯ ಮಾಡಿದ್ದಾರೆ.
ಕಾಲಿನ ಅಲರ್ಜಿಯಿಂದ ಬಳಲುತ್ತಿದ್ದ ವ್ಯಕ್ತಿಗೆ ಆಯುರ್ವೇದ ಚಿಕಿತ್ಸೆಯ ಅವಶ್ಯಕತೆಯಿದ್ದು, ಕಳೆದ ಶನಿವಾರವೂ ಸಿಎಂ ನೋಡಲು ಬಂದಿದ್ದರು. ಆದರೆ  ಸಾಧ್ಯವಾಗಿರಲಿಲ್ಲ, ಈ ವೇಳೆ ತಮ್ಮ ಪರ್ಸ್ ನಲ್ಲಿದ್ದ 7.500 ರು ಹಣವನ್ನು ಆತನಿಗೆ ನೀಡಿ, ಆರೋಗ್ಯವೇ ಬಹಳ ಮುಖ್ಯವಾದದ್ದು, ಯಾವತ್ತೂ ಅದನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com