ಬೆಂಗಳೂರು: ಮಳೆ ನೀರು ಕೊಯ್ಲು ವ್ಯವಸ್ಥೆ ಮತ್ತು ಚರಂಡಿ ನೀರು ಹರಿದು ಹೋಗಲು ಸರಿಯಾದ ಘಟಕಗಳಿಲ್ಲದ ಸ್ಥಳಗಳಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡುವುದನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿಲ್ಲಿಸಿದೆ.
ಆದರೆ ಹಳೆ ಮದ್ರಾಸ್ ರಸ್ತೆಯಲ್ಲಿ ಈ ವ್ಯವಸ್ಥೆಗಳನ್ನು ಹೊಂದಿರದ 30 ಮಹಡಿಯ ಅಪಾರ್ಟ್ ಮೆಂಟ್ ನಿರ್ಮಿಸಲು ಅನುಮೋದನೆ ನೀಡಿರುವುದಕ್ಕೆ ಪ್ಲಂಬರ್ಸ್ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರು ಜಲಮಂಡಳಿಯ ಅಧ್ಯಕ್ಷ ತುಶಾರ್ ಗಿರಿನಾಥ್, ಫ್ಲಾಟ್ ನಿರ್ಮಾಣದ ವೇಳೆ ನಡೆದಿದೆ ಎನ್ನಲಾದ ಹಲವು ಅಕ್ರಮಗಳಿಗೆ ಸಂಬಂಧಪಟ್ಟಂತೆ ತನಿಖೆಗೆ ಆದೇಶಿಸಿದ್ದಾರೆ.
ಹಳೆ ಮದ್ರಾಸ್ ರಸ್ತೆಯ ಭಟ್ಟರಹಳ್ಳಿಯಲ್ಲಿರುವ ಪಶ್ಮಿನಾ ಡೆವೆಲಪರ್ಸ್ ನಿರ್ಮಿಸಿರುವ ಅಪಾರ್ಟ್ ಮೆಂಟಿಗೆ ನೀರು ಮತ್ತು ಶುಚಿತ್ವ ಸಂಪರ್ಕಕ್ಕೆ ನೀಡಿರುವ ಆನ್ ಲೈನ್ ಅನುಮೋದನೆಗೆ ಸಂಬಂಧಪಟ್ಟಂತೆ ತನಿಖೆಗೆ ಆದೇಶ ನೀಡಲಾಗಿದೆ.