ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಸಂಜೆ ವೇಳೆಗೆ ಅರುಣಾ ಅವರಿಗೆ ಪತಿ ರಾಜಣ್ಣನನ್ನು ಭೇಟಿ ಮಾಡಲು ಅವಕಾಶ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಜೈಲಿನಿಂದ ಕೈದಿಯನ್ನು ಕಳುಹಿಸಿಕೊಡಲು ನ್ಯಾಯಾಲಯದಿಂದ ಅನುಮತಿ ಬೇಕು. ನ್ಯಾಯಾಲಯದಿಂದ ಅನುಮತಿ ಪತ್ರ ತನ್ನಿ ಎಂದು ಹೇಳಿ ಕೈದಿಯ ಪತ್ನಿಯನ್ನು ಜೈಲು ಅಧಿಕಾರಿಗಳು ಮರಳಿ ಕಳುಹಿಸಿದ್ದಾರೆ. ಈ ಬಗ್ಗೆ ಜೈಲಿನ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನ ನಡೆಸಲಾಗಿತ್ತಾದರೂ, ಯಾವ ಅಧಿಕಾರಿಗಳು ಸಂಪರ್ಕಕ್ಕೆ ಸಿಗಲಿಲ್ಲ.