ತಡವಾಗಿ ಬಂದ ಆ್ಯಂಬುಲೆನ್ಸ್: ತುಮಕೂರಿನಲ್ಲಿ 8 ವರ್ಷದ ಬಾಲಕ ಸಾವು

ಆ್ಯಂಬುಲೆನ್ಸ್ ಬರುವುದು ತಡವಾದ ಕಾರಣ ಕಾಯಿಲೆಯಿಂದ ಬಳಲುತ್ತಿದ್ದ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಪಾವಗಡದಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ತುಮಕೂರು: ಆ್ಯಂಬುಲೆನ್ಸ್ ಬರುವುದು ತಡವಾದ ಕಾರಣ ಕಾಯಿಲೆಯಿಂದ ಬಳಲುತ್ತಿದ್ದ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಪಾವಗಡದಲ್ಲಿ ನಡೆದಿದೆ.
8 ವರ್ಷದ ಶ್ರೀನಿಧಿ ಮೃತ ಬಾಲಕ. ವೆಂಕಟಸ್ವಾಮಿ-ಸುಗುಣಮ್ಮ ದಂಪತಿಯ ಮಗನಾದ ಶ್ರೀನಿಧಿ.
ಕಳೆದ ಮೂರ್ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದರು. ಈ ವೇಳೆ 108 ಸಿಬ್ಬಂದಿಗೆ ಮೃತ ಶ್ರೀನಿಧಿಯ ಪೋಷಕರು ತುರ್ತಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಮನವಿ ಮಾಡಿದ್ದರು. 
ಬಳಿಕ 2 ಗಂಟೆ ತಡವಾಗಿ ಬಾಲಕನನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಆ ವೇಳೆಗಾಗಲೇ ಬಾಲಕನ ಸ್ಥಿತಿ ತೀರಾ ಹದಗೆಟ್ಟಿದ್ದರಿಂದ ಅಲ್ಲಿಯ ವೈದ್ಯರು ಬಾಲಕನನ್ನು ಕೂಡಲೇ ಬೆಂಗಳೂರಿಗೆ ರವಾನಿಸುವಂತೆ ಹೇಳಿದ್ದರು. ಕೂಡಲೇ ಬಾಲಕನನ್ನ ಕರೆದುಕೊಂಡು ಹೋಗಿದ್ದಾರಾದರೂ ಬೆಂಗಳೂರು ತಲುಪುವ ಮೊದಲೇ ಮಾರ್ಗ ಮಧ್ಯದಲ್ಲಿ ಬಾಲಕ ಶ್ರೀನಿಧಿ ಕೊನೆಯುಸಿರೆಳೆದಿದ್ದಾನೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com