ಸಾಂದರ್ಭಿಕ ಚಿತ್ರ
ರಾಜ್ಯ
ತಡವಾಗಿ ಬಂದ ಆ್ಯಂಬುಲೆನ್ಸ್: ತುಮಕೂರಿನಲ್ಲಿ 8 ವರ್ಷದ ಬಾಲಕ ಸಾವು
ಆ್ಯಂಬುಲೆನ್ಸ್ ಬರುವುದು ತಡವಾದ ಕಾರಣ ಕಾಯಿಲೆಯಿಂದ ಬಳಲುತ್ತಿದ್ದ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಪಾವಗಡದಲ್ಲಿ...
ತುಮಕೂರು: ಆ್ಯಂಬುಲೆನ್ಸ್ ಬರುವುದು ತಡವಾದ ಕಾರಣ ಕಾಯಿಲೆಯಿಂದ ಬಳಲುತ್ತಿದ್ದ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಪಾವಗಡದಲ್ಲಿ ನಡೆದಿದೆ.
8 ವರ್ಷದ ಶ್ರೀನಿಧಿ ಮೃತ ಬಾಲಕ. ವೆಂಕಟಸ್ವಾಮಿ-ಸುಗುಣಮ್ಮ ದಂಪತಿಯ ಮಗನಾದ ಶ್ರೀನಿಧಿ.
ಕಳೆದ ಮೂರ್ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದರು. ಈ ವೇಳೆ 108 ಸಿಬ್ಬಂದಿಗೆ ಮೃತ ಶ್ರೀನಿಧಿಯ ಪೋಷಕರು ತುರ್ತಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಮನವಿ ಮಾಡಿದ್ದರು.
ಬಳಿಕ 2 ಗಂಟೆ ತಡವಾಗಿ ಬಾಲಕನನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಆ ವೇಳೆಗಾಗಲೇ ಬಾಲಕನ ಸ್ಥಿತಿ ತೀರಾ ಹದಗೆಟ್ಟಿದ್ದರಿಂದ ಅಲ್ಲಿಯ ವೈದ್ಯರು ಬಾಲಕನನ್ನು ಕೂಡಲೇ ಬೆಂಗಳೂರಿಗೆ ರವಾನಿಸುವಂತೆ ಹೇಳಿದ್ದರು. ಕೂಡಲೇ ಬಾಲಕನನ್ನ ಕರೆದುಕೊಂಡು ಹೋಗಿದ್ದಾರಾದರೂ ಬೆಂಗಳೂರು ತಲುಪುವ ಮೊದಲೇ ಮಾರ್ಗ ಮಧ್ಯದಲ್ಲಿ ಬಾಲಕ ಶ್ರೀನಿಧಿ ಕೊನೆಯುಸಿರೆಳೆದಿದ್ದಾನೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ