ಮಹದಾಯಿ ವಿವಾದ: ಸೊಬರದ ಮಠ ಮನವೊಲಿಕೆಗೆ ಯತ್ನ
ಮಹದಾಯಿ ಸಮಸ್ಯೆ ಪರಿಹಸಿರುವ ನಿಟ್ಟಿನಲ್ಲಿ ಗೋವಾ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದ್ದು, ರಾಜ್ಯ ಸರ್ಕಾರ ತನ್ನಿಂದಾಗುವ ಎಲ್ಲಾ ಪ್ರಯತ್ನಗಳನ್ನು ಮಾಡಿದೆ. ಹೀಗಾಗಿ ಉಪವಾಸ ಕೈಬಿಡುವಂತೆ ರೈತ ಸೇನೆ ರಾಜ್ಯ ಘಟಕದ ಅಧ್ಯಕ್ಷ ವೀರೇಶ್ ಸೊಬರದ ಮಠ ಅವರಿಗೆ ಕರೆ ಮಾಡಿ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸರ್ಕಾರದ ಪ್ರತಿನಿಧಿಯಾಗಿ ಸಚಿವ ವಿನಯ್ ಕುಲಕರ್ಣಿಯವರನ್ನು ಪ್ರತಿಭಟನಾ ಸ್ಥಳಕ್ಕೆ ಕಳುಹಿಸವುದಾಗಿ ಭರವಸೆ ನೀಡಿದ್ದಾರೆ.
ನಂತರ ಕುಲಕರ್ಣಿಯವರೊಂದಿಗೆ ಮಾತನಾಡಿ ಸಿದ್ದರಾಮಯ್ಯ ಅವರು, ನರಗುಂದದಲ್ಲಿ ಪ್ರತಿಭಟನೆ ನಡೆಸುವ ಬದಲು ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಿದರೆ ಶೀಘ್ರಗತಿಯಲ್ಲಿ ಫಲ ದೊರಕಲಿದೆ ಎಂದು ಭೇಟಿ ವೇಳೆ ವೀರೇಶ್ ಅವರಿಗೆ ತಿಳಿಸಿ ಎಂದು ಹೇಳಿದ್ದಾರೆ.