ಬೆಂಗಳೂರು: ಮೊಬೈಲ್ ಆಪ್ ಅಭಿವೃದ್ಧಿಪಡಿಸಲು ಸರಗಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

ಮೊಬೈಲ್ ಆಪ್ ಅಭಿವೃದ್ಧಿಪಡಿಸುವುದಕ್ಕೆ ಬೇಕಾದ ಹಣ ಹೊಂದಿಸುವುದಕ್ಕಾಗಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಮೊಬೈಲ್ ಆಪ್ ಅಭಿವೃದ್ಧಿಪಡಿಸುವುದಕ್ಕೆ ಬೇಕಾದ ಹಣ ಹೊಂದಿಸುವುದಕ್ಕಾಗಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಂಗಳೂರು ಪೊಲೀಸರು ಶನಿವಾರ ಬಂಧಿಸಿದ್ದಾರೆ. 
ಬಂಧಿತ ಆರೋಪಿಗಳನ್ನು ಎಚ್ಎಸ್ ಆರ್ ಲೇಔಟ್ ನಿವಾಸಿ ಜಬಿವುದ್ದೀನ್ ತಬ್ರೆಜ್(30) ಹಾಗೂ ಮಹಾಲಕ್ಷ್ಮೀ ಲೇಔಟ್ ನಿವಾಸಿ ಅರುಣ್ ಕುಮಾರ್(30) ಎಂದು ಗುರುತಿಸಲಾಗಿದೆ.
ಈ ಇಬ್ಬರು ಆರೋಪಿಗಳು ಈ ಹಿಂದೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಜೈಲಿನಲ್ಲಿಯೇ ಇಬ್ಬರ ಪರಿಚಯವಾಗಿದೆ. ಜೈಲಿನಲ್ಲಿರುವಾಗಲೇ ನಗರದ ಶಾಲಾ-ಕಾಲೇಜುಗಳ ಪರಿಚಯವಿರುವ ಮೊಬೈಲ್ ಆಪ್ ವೊಂದನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದ್ದರು. ಜೈಲಿನಿಂದ ಹೊರಬಂದ ಬಳಿಕ ಆಪ್ ಅಭಿವೃದ್ಧಿಪಡಿಸುವ ವ್ಯಕ್ತಿಯೊಬ್ಬರನ್ನು ಸಂಪರ್ಕಿಸಿದ್ದರು. ಆಪ್ ಅಭಿವೃದ್ಧಿಪಡಿಸಲು 2 ಲಕ್ಷ ರುಪಾಯಿ ವೆಚ್ಚವಾಗುತ್ತದೆ ಎಂದು ಅವರು ಹೇಳಿದ್ದರಿಂದ ಅದಕ್ಕೆ ಹಣ ಹೊಂದಿಸಲು ಸರಗಳ್ಳತನಕ್ಕಿಳಿದದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಇಬ್ಬರು ಆರೋಪಿಗಳು ಕಳೆದ ಮಾರ್ಚ್ ನಿಂದ ಜೂನ್ 2017ರವರೆಗೆ ನಗರದ 17 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 29 ಚಿನ್ನದ ಸರಗಳನ್ನು ಕದ್ದಿದ್ದಾರೆ. ಈ ಇಬ್ಬರಿಗೂ ಕ್ರಿಮಿನಲ್ ಹಿನ್ನಲೆ ಇದ್ದು, 49 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com