ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ, ಜಿಲ್ಲಾ ಬಿಜೆಪಿ ಸಾಮಾಜಿಕ ಘಟಕದ ಸಂಚಾಲಕ, ಬಾಲಾಜಿ ಶ್ರೀನಿವಾಸ್, ಬಿಜೆಪಿಯ ಸಾಮಾಜಿಕ ಮಾಧ್ಯಮದ ಸಕ್ರಿಯ ಕಾರ್ಯಕರ್ತರ ಬೃಹತ್ ಮೇಳವನ್ನು ಆಯೋಜಿಸಲಿದ್ದು, ಆಗಸ್ಟ್ 6ರಂದು ಅರಮನೆ ಮೈದಾನದಲ್ಲಿ ನಡೆಯಲಿದೆ. ಇಲ್ಲಿಯವರೆಗೆ 12,000 ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೆಸರು ದಾಖಲು ಮಾಡಿಕೊಂಡಿದ್ದಾರೆ. ಸುಮಾರು 6,000 ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.