ಯು.ಆರ್.ರಾವ್ ನಿಧನ ಸುದ್ದಿ ಆಘಾತ ತಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಮಾಜಿ ಇಸ್ರೋ ಮುಖ್ಯಸ್ಥ ಪ್ರೊ.ಯು.ಆರ್. ರಾವ್ ಅವರ ನಿಧನದ ಸುದ್ದಿ ಆಘಾತವನ್ನು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on
ಬೆಂಗಳೂರು: ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಮಾಜಿ ಇಸ್ರೋ ಮುಖ್ಯಸ್ಥ ಪ್ರೊ.ಯು.ಆರ್. ರಾವ್ ಅವರ ನಿಧನದ ಸುದ್ದಿ ಆಘಾತವನ್ನು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. 
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಯು.ಆರ್. ರಾವ್ ಅವರ ನಿಧನ ಸುದ್ಧಿ ಆಘಾತವನ್ನು ತಂದಿದ್ದು, ರಾವ್ ಅವರನ್ನು ಕಳೆದುಕೊಂಡ ನಾಡು ಇಂದು ಶೋಕತಪ್ತವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ. 
ಇಸ್ರೋವನ್ನು ಜಗತ್ತಿನ ಉತ್ಕೃಷ್ಟ ಬಾಹ್ಯಾಕಾಶ ಸಂಸ್ಥೆಯಾಗಿ ರೂಪಿಸುವಲ್ಲಿ ಯು.ಆರ್. ರಾವ್ ಅವರ ದೂರದರ್ಶಿತ್ವದ ಕೊಡುಗೆ ಅಪಾರವದಾದದ್ದು. ನಾಡು ಅವರ ಸಾಧನೆಗಳನ್ನು ಸದಾ ಸ್ಮರಿಸುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com