ಅವರು ಬೆಂಗಳೂರಿನಲ್ಲಿ ನಿನ್ನೆ ಸಮ್ಮೇಳನವೊಂದರ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿ, ಈ ಪ್ರಶಸ್ತಿಗಳು ಸಮಸ್ಯೆಗಳನ್ನು ಬಗೆಹರಿಸುವುದಕ್ಕಿಂತ ಹೆಚ್ಚಾಗಿ ಸಮಸ್ಯೆಗಳನ್ನು ಸೃಷ್ಟಿಸುತ್ತವೆ. ಹಾಗಾಗಿ ಈ ಪ್ರಶಸ್ತಿಗಳನ್ನು ನೀಡದಿರುವುದೇ ಒಳ್ಳೆಯದೆಂದು ನನ್ನ ಭಾವನೆ. ನಾವು ಶ್ರದ್ಧೆ, ಪ್ರಾಮಾಣಿಕತೆಯಿಂದ ಮಾಡುವ ಕೆಲಸವೇ ನಮಗೆ ಒಂದು ದೊಡ್ಡ ಬಹುಮಾನ ಎಂದು ಅಭಿಪ್ರಾಯಪಟ್ಟರು.